ಮಂಗಳವಾರ, ಜುಲೈ 29
ನೀನು ಮಾಡೋದೆಲ್ಲ ನನಗೆ ತುಂಬ ಖುಷಿ ತರುತ್ತೆ.—ಲೂಕ 3:22.
ಯೆಹೋವ ದೇವರಿಗೆ ತನ್ನ ಜನ್ರಂದ್ರೆ ತುಂಬ ಇಷ್ಟ. ಆತನು ಅವ್ರನ್ನ ಮೆಚ್ಕೊಳ್ತಾನೆ. ಅದಕ್ಕೇ ಬೈಬಲ್ “ಯೆಹೋವ ತನ್ನ ಜನ್ರನ್ನ ನೋಡಿ ಖುಷಿಪಡ್ತಾನೆ” ಅಂತ ಹೇಳುತ್ತೆ. (ಕೀರ್ತ. 149:4) ಆದ್ರೆ ಕೆಲವು ಸಲ ನಾವು ಕುಗ್ಗಿಹೋದಾಗ ‘ಯೆಹೋವ ನನ್ನನ್ನ ಮೆಚ್ಕೊಳ್ತಾನಾ?’ ಅಂತ ಅನಿಸುತ್ತೆ. ಇದೇ ತರ ಹಿಂದಿನ ಕಾಲದಲ್ಲಿದ್ದ ಯೆಹೋವನ ಸೇವಕರಿಗೂ ಅನಿಸಿತ್ತು. (1 ಸಮು. 1:6-10; ಯೋಬ 29:2, 4; ಕೀರ್ತ. 51:11) ನಾವು ಅಪರಿಪೂರ್ಣರಾಗಿದ್ರೂ ಯೆಹೋವನ ಮೆಚ್ಚಿಗೆ ಪಡ್ಕೊಳ್ಳೋಕೆ ಆಗುತ್ತೆ ಅಂತ ಬೈಬಲ್ ಹೇಳುತ್ತೆ. ಅದಕ್ಕೆ ಏನು ಮಾಡಬೇಕು? ನಾವು ಯೇಸು ಮೇಲೆ ನಂಬಿಕೆ ಇಟ್ಟು ದೀಕ್ಷಾಸ್ನಾನ ತಗೊಬೇಕು. (ಯೋಹಾ. 3:16) ಹೀಗೆ ಮಾಡೋದ್ರ ಮೂಲಕ ನಾವು ನಮ್ಮ ಪಾಪಗಳಿಗೆ ಪಶ್ಚಾತ್ತಾಪಪಟ್ಟಿದ್ದೀವಿ, ಯೆಹೋವನ ಇಷ್ಟ ಮಾಡ್ತೀವಿ ಅಂತ ಮಾತು ಕೊಟ್ಟಿದ್ದೀವಿ ಅಂತ ಎಲ್ರಿಗೂ ತೋರಿಸ್ಕೊಡ್ತೀವಿ. (ಅ. ಕಾ. 2:38; 3:19) ಯೆಹೋವನ ಜೊತೆ ಫ್ರೆಂಡ್ಶಿಪ್ ಮಾಡ್ಕೊಳ್ಳೋಕೆ ನಾವು ಈ ಹೆಜ್ಜೆ ತಗೊಳ್ಳುವಾಗ ಆತನಿಗೆ ತುಂಬ ಖುಷಿ ಆಗುತ್ತೆ. ನಾವು ಸಮರ್ಪಣೆಯಲ್ಲಿ ಕೊಟ್ಟ ಮಾತನ್ನ ಉಳಿಸ್ಕೊಳ್ಳೋಕೆ ಎಲ್ಲಿ ತನಕ ಪ್ರಯತ್ನ ಹಾಕ್ತೀವೋ ಅಲ್ಲಿ ತನಕ ಯೆಹೋವ ನಮ್ಮ ಸ್ನೇಹಿತನಾಗಿ ಇರ್ತಾನೆ ಮತ್ತು ನಮ್ಮನ್ನ ಮೆಚ್ಕೊಳ್ತಾನೆ.—ಕೀರ್ತ. 25:14. w24.03 26 ¶1-2
ಬುಧವಾರ, ಜುಲೈ 30
ನಾವಂತೂ ನೋಡಿದ್ದನ್ನ, ಕೇಳಿದ್ದನ್ನ ಮಾತಾಡದೆ ಇರಲ್ಲ ಅಂದ್ರು.—ಅ. ಕಾ. 4:20.
ಸಿಹಿಸುದ್ದಿ ಸಾರಬಾರದು ಅಂತ ಸರ್ಕಾರ ಹೇಳಿದ್ರೂ ನಾವು ಯೇಸುವಿನ ಶಿಷ್ಯರ ತರ ಸಾರುತ್ತಾ ಇರ್ತೀವಿ. ಯೆಹೋವ ನಮಗೆ ಸಹಾಯ ಮಾಡೇ ಮಾಡ್ತಾನೆ ಅಂತ ನಾವು ನಂಬಬೇಕು. ಧೈರ್ಯ, ವಿವೇಕ ಕೊಡಪ್ಪಾ ಅಂತ ಬೇಡ್ಕೊಬೇಕು. ಅಷ್ಟೇ ಅಲ್ಲ, ಕಷ್ಟಗಳನ್ನ ನಿಭಾಯಿಸೋಕೆ ಯೆಹೋವನ ಹತ್ರ ಸಹಾಯ ಕೇಳಬೇಕು. ನಮಗೆ ಯಾವೆಲ್ಲ ಕಷ್ಟಗಳು ಬರಬಹುದು? ನಮ್ಮ ಆರೋಗ್ಯ ಹಾಳಾಗಬಹುದು, ಬೇಜಾರಲ್ಲಿ ಮುಳುಗಿ ಹೋಗಬಹುದು, ನಮ್ಮವರು ಯಾರಾದ್ರೂ ತೀರಿಹೋಗಬಹುದು, ಕುಟುಂಬದಲ್ಲಿ ಏನಾದ್ರೂ ಸಮಸ್ಯೆ ಬರಬಹುದು ಅಥವಾ ಹಿಂಸೆ ಬರಬಹುದು. ಈ ತರ ಸಮಸ್ಯೆಗಳು ಬಂದಾಗ ಜೀವನ ಮಾಡೋಕೆ ತುಂಬ ಕಷ್ಟ ಆಗುತ್ತೆ. ಇದ್ರ ಜೊತೆಗೆ ನಾವಿರೋ ಜಾಗದಲ್ಲಿ ಅಂಟುರೋಗ ಇದ್ರೆ ಅಥವಾ ಯುದ್ಧ ನಡೀತಾ ಇದ್ರೆ ಜೀವನ ಮಾಡೋಕೆ ಇನ್ನೂ ಕಷ್ಟ ಆಗುತ್ತೆ. ಇಂಥ ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ನಾವು ಯೆಹೋವನ ಹತ್ರ ಎಲ್ಲಾ ಹೇಳ್ಕೊಬೇಕು. ಒಬ್ಬ ಸ್ನೇಹಿತನ ಹತ್ರ ಮನಸ್ಸುಬಿಚ್ಚಿ ಮಾತಾಡೋ ತರ ಮಾತಾಡಬೇಕು. ಆಗ ಯೆಹೋವನೇ ನಮ್ಮ “ಪರವಾಗಿ ಹೆಜ್ಜೆ ತಗೊತಾನೆ.” (ಕೀರ್ತ. 37:3, 5) ನಾವು ಪಟ್ಟುಬಿಡದೆ ಪ್ರಾರ್ಥನೆ ಮಾಡಿದ್ರೆ ‘ಕಷ್ಟಗಳನ್ನ ಸಹಿಸ್ಕೊಳ್ಳೋಕೆ ಆಗುತ್ತೆ.’ (ರೋಮ. 12:12) ನಾವು ಯಾವ ಕಷ್ಟದಲ್ಲಿ ಇದ್ದೀವಿ ಅಂತ ಯೆಹೋವನಿಗೆ ಗೊತ್ತು. ‘ಸಹಾಯಕ್ಕಾಗಿ ನಾವಿಡೋ ಮೊರೆಯನ್ನ ಆತನು ಕೇಳಿಸ್ಕೊಳ್ತಾನೆ.’—ಕೀರ್ತ. 145:18, 19. w23.05 5-6 ¶12-15
ಗುರುವಾರ, ಜುಲೈ 31
ದೇವರಿಗೆ ಏನು ಇಷ್ಟ ಅಂತ ಯಾವಾಗ್ಲೂ ಪರೀಕ್ಷೆ ಮಾಡಿ ತಿಳ್ಕೊಳ್ಳಿ.—ಎಫೆ. 5:10.
ನಾವು ಒಂದು ಮುಖ್ಯವಾದ ತೀರ್ಮಾನ ತಗೊಳ್ಳೋ ಮುಂಚೆ ಏನು ಮಾಡಬೇಕು? “ಯೆಹೋವನ ಇಷ್ಟ ಏನಂತ” ಅರ್ಥ ಮಾಡ್ಕೊಂಡು ಅದಕ್ಕೆ ತಕ್ಕ ಹಾಗೆ ನಡ್ಕೊಬೇಕು. (ಎಫೆ. 5:17) ನಮ್ಮ ಸನ್ನಿವೇಶಕ್ಕೆ ಯಾವ ಬೈಬಲ್ ತತ್ವ ಪಾಲಿಸಬೇಕು ಅಂತ ಕಂಡುಹಿಡಿದ್ರೆ ಯೆಹೋವ ದೇವರ ತರ ಯೋಚಿಸೋಕೆ ಪ್ರಯತ್ನ ಮಾಡ್ತಿದ್ದೀವಿ ಅಂತ ತೋರಿಸೋಕಾಗುತ್ತೆ. ಆಮೇಲೆ ಆ ತತ್ವ ಪಾಲಿಸಿದ್ರೆ ಒಳ್ಳೇ ತೀರ್ಮಾನ ಮಾಡೋಕಾಗುತ್ತೆ. ಯಾಕಂದ್ರೆ ನಮ್ಮ ವೈರಿಯಾದ “ಸೈತಾನ” ನಾವು ಈ ಲೋಕದ ವಿಷ್ಯಗಳಲ್ಲೇ ಮುಳುಗಿಹೋಗೋ ತರ ಮಾಡ್ತಾನೆ. ಆಗ ಯೆಹೋವನ ಸೇವೆ ಮಾಡೋಕೆ ನಮಗೆ ಟೈಮೇ ಇಲ್ಲ ಅಂತ ಅನಿಸಿಬಿಡುತ್ತೆ. (1 ಯೋಹಾ. 5:19) ಒಂದುವೇಳೆ ನಮಗೆ ಹೀಗೆ ಅನಿಸಿದ್ರೆ ಯೆಹೋವನ ಸೇವೆ ಮಾಡೋದಕ್ಕಿಂತ ಹಣ, ಆಸ್ತಿ-ಪಾಸ್ತಿ, ಕೆಲಸ, ಶಿಕ್ಷಣ ಇದನ್ನ ಮಾಡೋದೇ ನಮ್ಮ ಜೀವನದಲ್ಲಿ ಮುಖ್ಯ ಆಗಿಬಿಡುತ್ತೆ. ಇದೆಲ್ಲ ನಮ್ಮ ಜೀವನಕ್ಕೆ ಬೇಕು ನಿಜ, ಆದ್ರೆ ಅದು ಯೆಹೋವನ ಸೇವೆಗಿಂತ ಮುಖ್ಯ ಆಗಬಾರದು. ಒಂದುವೇಳೆ ನಾವು ಹೀಗೇನಾದ್ರೂ ಮಾಡಿದ್ರೆ ನಾವೂ ಲೋಕದ ಜನ್ರ ತರ ಯೋಚ್ನೆ ಮಾಡ್ತಿದ್ದೀವಿ ಅಂತ ಅರ್ಥ. w24.03 24 ¶16-17